ಗಜೇಶ ಮಸಣಯ್ಯ


ಗಜೇಶ ಮಸಣಯ್ಯ : - ೧೨ನೇ ಶತಮಾನದ ಅಪ್ರಸಿದ್ದ ವಚನಕಾರ, ಅಕಲಕೋಟೆ ತಾಲ್ಲೋಕಿನ ಕರಜಗಿ ಗ್ರಾಮದ ನಿವಾಸಿ. ಬಸವಾದಿ ಶರಣರ ಸಮಕಾಲೀನ. ಈತನ ಪತ್ನಿಯ ಹೆಸರು ಏನೆಂದು ತಿಳಿಯುವುದಿಲ್ಲವಾದರೂ ಆಕೆಯೂ ವಚನಕಾರ್ತಿಯಾಗಿರುವುದನ್ನು ಗಮನಿಸಬಹುದಾಗಿದೆ. ಇಂತಹ ಒಂದೆರಡು ಪ್ರಸಂಗಗಳು ವಚನ ಸಾಹಿತ್ಯಯುಗದಲ್ಲಿ ದಾಖಲಾಗಿವೆ. ಅವೆಲ್ಲವೂ ಷಟ್ಸ್ಥಲಸಿದ್ದಾಂತದ ವಿವರಗಳನ್ನು, ಆತ್ಮಜ್ಞಾನದ ತಿಳುವಳಿಕೆಯನ್ನು ಒಳಗೊಂಡಿವೆ. ಇವರ ವಚನಗಳ ಅಂಕಿತ "ಮಹಾಲಿಂಗ ಗಜೇಶ್ವರ".

ಗಜೇಶ ಮಸಣಯ್ಯ
ಜನನ೧೧೬೫
ಅಂಕಿತನಾಮಮಹಾಲಿಂಗ ಗಜೇಶ್ವರ
ಸಂಗಾತಿ(ಗಳು)ಪುಣ್ಯಸ್ತ್ರೀ

ಹೊಸ ಮದುವೆ ಹಸೆ ಉಡುಗದ ಮುನ್ನ
ಹೂಸಿದರಿಶಿನ ಬಿಸಿಲಿಂಗೆ ಹರಿಯದ ಮುನ್ನ
ನೀರ ತಾಳ್ಮೆ ಹರಿಯದ ಮುನ್ನ
ತನು ಸಂಚಳವಾಗಿ, ಮನ ಗುರುಕಾರುಣ್ಯವ ಪಡೆದು
ಹುಸಿ ಇಲ್ಲದಿದ್ದಡೆ ಭಕ್ತನೆಂಬೆ
ಪಿಡಿಯಲಿಲ್ಲದಿದ್ದಡೆ ಮಾಹೇಶ್ವರನೆಂಬೆ
ತನುವಿಲ್ಲದಿದ್ದಡೆ ಪ್ರಸಾದಿ ಎಂಬೆ
ಭೇಧವಿಲ್ಲದಿದ್ದಡೆ ಪ್ರಾಣಲಿಂಗಿ ಎಂಬೆ
ಆಸೆ ಇಲ್ಲದಿದ್ದಡೆ ಶರಣನೆಂಬೆ
ಐವರ ಸಂಪರ್ಕ ಭೋಗವಾ[ಗ]ದಡೆ ಐಕ್ಯನೆಂಬೆ
ಐಕ್ಯದ ಸಂತೋಷ ಹಿಂಗಿದಡೆ ಜ್ಯೋತಿರ್ಮಯವೆಂಬೆ
ಇಂತಾಗಬೇಕೆಂಬ ಮನದ ದೇಹ
ಇರಿದಡರಿಯದು, ಸ್ತುತಿಸಿದಡರಿಯದು
ಸುಖವನರಿಯದು, ದುಃಖವನರಿಯದು
ಈ ಚತಿರ್ವಿಧ ತಾಗು ನಿರೋಧವನರಿಯದಿರ್ದಡೆ
ಅದೇ ಮಹಾಲಿಂಗ ಗಜೇಶ್ವರನೆಂಬೆ

🔥 Top keywords: ಕನ್ನಡ ಅಕ್ಷರಮಾಲೆಕುವೆಂಪುಸಹಾಯ:ಲಿಪ್ಯಂತರಮುಖ್ಯ ಪುಟವಿಶೇಷ:Searchವಿಶ್ವ ಪರಿಸರ ದಿನನಾಲ್ವಡಿ ಕೃಷ್ಣರಾಜ ಒಡೆಯರುಕನ್ನಡಗಾದೆಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಕನ್ನಡ ಗುಣಿತಾಕ್ಷರಗಳುಕರ್ನಾಟಕ ವಿಧಾನ ಪರಿಷತ್ದ.ರಾ.ಬೇಂದ್ರೆಶಿವರಾಮ ಕಾರಂತಬಸವೇಶ್ವರಕರ್ನಾಟಕದ ಜಿಲ್ಲೆಗಳುವರ್ಗೀಯ ವ್ಯಂಜನಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳುಮಾಸ್ತಿ ವೆಂಕಟೇಶ ಅಯ್ಯಂಗಾರ್ಗೌತಮ ಬುದ್ಧಭಾರತದ ಪ್ರಧಾನ ಮಂತ್ರಿಗಳ ಪಟ್ಟಿಕನ್ನಡ ಸಂಧಿಭಾರತದ ಸಂವಿಧಾನಚಂದ್ರಶೇಖರ ಕಂಬಾರಬಿ. ಆರ್. ಅಂಬೇಡ್ಕರ್ಮಳೆಬಿಲ್ಲುಅಕ್ಕಮಹಾದೇವಿಕನ್ನಡ ವ್ಯಾಕರಣಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಾಹಿತ್ಯಜಿ.ಎಸ್.ಶಿವರುದ್ರಪ್ಪಗಿರೀಶ್ ಕಾರ್ನಾಡ್ವಿಭಕ್ತಿ ಪ್ರತ್ಯಯಗಳುಕರ್ನಾಟಕಯು.ಆರ್.ಅನಂತಮೂರ್ತಿವ್ಯಂಜನವಿಜಯನಗರ ಸಾಮ್ರಾಜ್ಯಲೋಕಸಭೆ