ಭೀಮಾ ನದಿಯು ಕೃಷ್ಣಾ ನದಿಯ ಉಪನದಿಯಾಗಿದೆ.

ಉಗಮ--ಸಂಗಮ ಬದಲಾಯಿಸಿ

ಭೀಮಾ ನದಿಯು ಮಹಾರಾಷ್ಟ್ರದಲ್ಲಿ ಪುಣೆಗೆ ಹತ್ತಿರವಾಗಿರುವ ಭೀಮಾಶಂಕರ ಅರಣ್ಯಪ್ರದೇಶದಲ್ಲಿ ಜನಿಸಿದೆ. ಕರ್ನಾಟಕದಲ್ಲಿ ರಾಯಚೂರು ಜಿಲ್ಲೆಯ ಕಡ್ಲೂರು ಊರ ಹತ್ತಿರ, ಆಂಧ್ರಪ್ರದೇಶದ ಗಡಿಗೆ ಸಮೀಪವಾಗಿ ಈ ನದಿಯು ಕೃಷ್ಣಾ ನದಿಯನ್ನು ಕೂಡುತ್ತದೆ. ಕರ್ನಾಟಕದಲ್ಲಿ ಈ ನದಿಯ ಉದ್ದ ಸುಮಾರು ೩೦೦ ಕಿ.ಮೀ.ಗಳಷ್ಟು.

ಉಪನದಿಗಳು ಬದಲಾಯಿಸಿ

ಕರ್ನಾಟಕದಲ್ಲಿ ಅಮರಜಾ, ಮುಲ್ಲಾಮಾರಿ, ಗಂಡೋರಿ ಹಳ್ಳ, ಕಾಗಿನಾ ಹಾಗು ಬೆಣ್ಣೆತೊರಾ ಇವು ಭೀಮಾನದಿಯ ಉಪನದಿಗಳು.(tributaries)

ಆಣೆಕಟ್ಟುಗಳು ಬದಲಾಯಿಸಿ

ಭೀಮಾ ನದಿಗೆ ಕಲಬುರ್ಗಿ ಜಿಲ್ಲೆಯ ನೆಲೊಗಿ "ಗ್ರಾಮದ ಹತ್ತಿರ ಆಣೆಕಟ್ಟು ಕಟ್ಟುವ ಯೋಜನೆ ಇದೆ. ಭೀಮಾ ನದಿಯ ಉಪನದಿಗಳಿಗೆ ಈಗಾಗಲೆ ಸಣ್ಣಪುಟ್ಟ ಆಣೆಕಟ್ಟುಗಳನ್ನು ಕಟ್ಟಲಾಗಿದೆ.jwusj

ಮಹತ್ವದ ತೀರ ಪ್ರದೇಶಗಳು ಬದಲಾಯಿಸಿ

ಭೀಮಾನದಿಯ ಉಗಮದಲ್ಲಿರುವ ಭೀಮಾಶಂಕರವು ಒಂದು ಪವಿತ್ರ ಯಾತ್ರಾಸ್ಥಳ. ದ್ವಾದಶಲಿಂಗಗಳಲ್ಲಿಯ ಒಂದು ಲಿಂಗ ಭೀಮಾಶಂಕರದಲ್ಲಿದೆ.

ಅಷ್ಟವಿನಾಯಕರಲ್ಲಿಯ ಒಂದು ವಿನಾಯಕ ದೇವಾಲಯವು ಸಿದ್ಧಟೇಕದಲ್ಲಿದೆ.

ಸುಪ್ರಸಿದ್ಧ ಪಂಢರಪುರ ವಿಠ್ಠಲ ದೇವಸ್ಥಾನವು ಸೊಲ್ಲಾಪುರ ಜಿಲ್ಲೆಯಲ್ಲಿದೆ.

ಸುಪ್ರಸಿದ್ಧ ಧೂಳಖೇಡ ಶಂಕರಲಿಂಗ ದೇವಸ್ಥಾನವು ವಿಜಯಪುರ ಜಿಲ್ಲೆಯಲ್ಲಿದೆ.

ಪ್ರಸಿದ್ಧ ದತ್ತಪೀಠವಾದ ಗಾಣಗಾಪುರವು ಭೀಮಾದ ಉಪನದಿಯಾದ ಅಮರಜಾದ ತೀರದಲ್ಲಿದೆ.

ಪ್ರಸಿದ್ಧ ಶಕ್ತಿಪೀಠವಾದ, ಚಂದ್ರಲಾ ಪರಮೇಶ್ವರಿಯ ದೇವಸ್ಥಾನವಿರುವ ಸನ್ನತಿ ಗ್ರಾಮವು ಭೀಮಾನದಿಯ ದಂಡೆಯ ಮೇಲಿದೆ. ಇದೇ ಗ್ರಾಮದಲ್ಲಿ ಪ್ರಾಚ್ಯ ಸಂಶೋಧಕರಿಗೆ ಬೌದ್ಧ ವಿಹಾರದ ಅವಶೇಷಗಳು ದೊರೆತಿವೆ.

ಕಾಗಿನಾ ಉಪನದಿಯ ತೀರದಲ್ಲಿ ಹೊನಗುಂಟಾ ಗ್ರಾಮದಲ್ಲಿ ಚಂದ್ರಲಾ ಪರಮೇಶ್ವರಿಯ ಮತ್ತೊಂದು ದೇವಸ್ಥಾನವಿದೆ.

🔥 Top keywords: ಮುಖ್ಯ ಪುಟಷರಾಯಿಕುವೆಂಪುವಿಶೇಷ:Searchಸಹಾಯ:ಲಿಪ್ಯಂತರಕನ್ನಡ ಅಕ್ಷರಮಾಲೆಗಾದೆಪಕ್ಷಕನ್ನಡಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಟಿಬೆಟ್ದ.ರಾ.ಬೇಂದ್ರೆ೨೦೨೪ ಐಸಿಸಿ ಪುರುಷರ ಟಿ೨೦ ವಿಶ್ವಕಪ್ಬಸವೇಶ್ವರಭಾರತದ ೨೦೨೪ರ ಸಾರ್ವತ್ರಿಕ ಚುನಾವಣೆಗಳುಭಾರತದ ಸಂವಿಧಾನಬಿ. ಆರ್. ಅಂಬೇಡ್ಕರ್ವಿಶ್ವ ಪರಿಸರ ದಿನಶಿವರಾಮ ಕಾರಂತಕನ್ನಡ ಗುಣಿತಾಕ್ಷರಗಳುಚಂದ್ರಶೇಖರ ಕಂಬಾರಮಾಸ್ತಿ ವೆಂಕಟೇಶ ಅಯ್ಯಂಗಾರ್ಯು.ಆರ್.ಅನಂತಮೂರ್ತಿಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಗೌತಮ ಬುದ್ಧಅಕ್ಕಮಹಾದೇವಿಕರ್ನಾಟಕಕನ್ನಡ ಸಂಧಿಭಾರತದ ರಾಷ್ಟ್ರಪತಿಗಳ ಪಟ್ಟಿಜಾನಪದನಾಲ್ವಡಿ ಕೃಷ್ಣರಾಜ ಒಡೆಯರುಸ್ವಾಮಿ ವಿವೇಕಾನಂದಕರ್ನಾಟಕದ ಏಕೀಕರಣಭಾರತೀಯ ಮೂಲಭೂತ ಹಕ್ಕುಗಳುಕನ್ನಡ ವ್ಯಾಕರಣಕರ್ನಾಟಕದ ಜಾನಪದ ಕಲೆಗಳುಪರಿಪೂರ್ಣ ಪೈಪೋಟಿಲೋಕಸಭೆಜನಪದ ಕಲೆಗಳು